ತುಮಕೂರು: ‘ನಾವು ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದೇವೆ’ ಎಂಬ ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ ಅವರ ಹೇಳಿಕೆಯಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿದ್ದು, ರಾಜಕೀಯವಾಗಿ ಇಕ್ಕಟ್ಟಿಗೆ ಸಿಲುಕಿದೆ. ಘಟನೆಗೆ ಸಂಬಂಧಿಸಿದಂತೆ ಮಾಧುಸ್ವಾಮಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿವರಣೆ ನೀಡಿದ್ದು, ಮುಖ್ಯಮಂತ್ರಿ ಸೂಚಿಸಿದರೆ ರಾಜೀನಾಮೆ ನೀಡುವೆ ಎಂದು ಪ್ರಕಟಿಸಿದ್ದಾರೆ.
ಈ ವಿವಾದವನ್ನು ರಾಜಕೀಯ ಅಸ್ತ್ರವಾಗಿ ಕೈಗೆತ್ತಿಕೊಂಡಿರುವ ಕಾಂಗ್ರೆಸ್ ಪಕ್ಷ, ಸರ್ಕಾರದ ಅಸಮರ್ಥತೆ ಸಚಿವರ ಹೇಳಿಕೆಯಿಂದಲೇ ಸಾಬೀತಾಗಿದೆ. ಇಂತಹ ಸರ್ಕಾರ ಯಾವ ಪುರುಷಾರ್ಥಕ್ಕೆ ಇರಬೇಕು ಎಂದು ವಾಗ್ದಾಳಿ ನಡೆಸಿದೆ. ಅದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮಾಧುಸ್ವಾಮಿ ಅವರ ಬಳಿ ಮಾತನಾಡಿದ್ದೇನೆ. ಅವರ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳಬಾರದು ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

