Breaking News

ಗಣೇಶ ಹಬ್ಬವನ್ನು ಚಾಮರಾಜಪೇಟೆ ಮೈದಾನದಲ್ಲಿ ಆಚರಣೆ ಕುರಿತು ಸಿಎಂ ಜೊತೆ ಚರ್ಚೆ : ಆರ್. ಅಶೋಕ್


ಬೆಂಗಳೂರು: ಕಳೆದ 75 ವರ್ಷದಲ್ಲಿ ರಾಷ್ಟ್ರ ಧ್ವಜ ಹಾರಿಸಿರದ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿದೆ ಅದರಂತೆ ಮುಂಬರುವ ಗಣೇಶ ಹಬ್ಬವನ್ನು ಕೂಡಾ ಈ ಮೈದಾನದಲ್ಲಿ ಆಚರಿಸಲು ಸಿಎಂ ಜೊತೆ ಮಾತುಕತೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆ ಮಾಡುವ ಕುರಿತು ಜಿಲ್ಲಾಡಳಿತಕ್ಕೆ ಮನವಿ ಪತ್ರಗಳು ಬಂದಿದ್ದು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು ಅಲ್ಲದೆ ಈಗ ಆ ಜಾಗ ಕಂದಾಯ ಇಲಾಖೆಗೆ ಸೇರಿದೆ ಅಲ್ಲಿ ಏನು ಆಗಬೇಕು ಎಂದು ತೀರ್ಮಾನ ಮಾಡುವ ಅಧಿಕಾರ ಸರ್ಕಾರಕ್ಕೆ ಇದೆ ಎಂದರು.

75 ವರ್ಷದಲ್ಲಿ ಆ ಮೈದಾನದಲ್ಲಿ ಧ್ವಜ ಹಾರಸಿರಲಿಲ್ಲ ಈಗ ನಾನು ಕಂದಾಯ ಸಚಿವನಾದ ಬಳಿಕ ಮೊದಲ ಭಾರಿ ಧ್ವಜ ಹಾರಸಿದ್ದೇವೆ ಇದಕ್ಕೆ ಅಲ್ಲಿನ ಸ್ಥಳಿಯರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

Share News

About BigTv News

Check Also

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …

Leave a Reply

Your email address will not be published. Required fields are marked *