ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬೆಂಗಾವಲು ವಾಹನ ಚಾಲಕ ಹೃದಯಾಘಾತಗೊಂಡು ತಿರುಮಲೇಶ್ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ತಿರುಮೇಶ್ ಅವರಿಗೆ ಗುರುವಾರ ರಾತ್ರಿ ಹೃದಯಾಘಾತವಾಗಿದ್ದು, 11 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಎಂದಿನಂತೆ ಸಂಜೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದರು. ಆದರೆ ರಾತ್ರಿ ಇದ್ದಕ್ಕಿದ್ದ ಹಾಗೆ ಎದೆನೋವು ಕಾಣಿಸಿಕೊಂಡಿತ್ತು. ಕಳೆದ 16 ವರ್ಷಗಳಿಂದ ಯಡಿಯೂರಪ್ಪ ಅವರ ಬಳಿಯೇ ಬೆಂಗಾವಲು ಸಿಬ್ಬಂದಿಯಾಗಿ ತಿರುಮಲೇಶ್ ಕರ್ತವ್ಯದಲ್ಲಿದ್ದರು. ತಿರುಮಲೇಶ್ ಅಕಾಲಿಕ ಅಗಲಿಕೆಗೆ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

