Breaking News

ಆರ್ ಎಸ್ ಎಸ್ ಪಕ್ಕಾ ದೇಶದ್ರೋಹಿಗಳಿರುವ ಸಂಘಟನೆ: ಪ್ರಿಯಾಂಕ್ ಖರ್ಗೆ ಆರೋಪ


ವಾಡಿ (ಚಿತ್ತಾಪುರ): ಸ್ವಾತಂತ್ರ್ಯ ಸಿಕ್ಕು ಐವತ್ತು ವರ್ಷಗಳ ನಂತರವೂ ಕಚೇರಿಗಳ ಮೇಲೆ ತ್ರೀವರ್ಣ ಬಾವುಟ ಹಾರಿಸದ ಆರ್ ಎಸ್ ಎಸ್ ಪಕ್ಕಾ ದೇಶದ್ರೋಹಿಗಳಿರುವ ಸಂಘಟನೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ಚಿತ್ತಾಪುರ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಮಾರಂಭದ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ತಿರಂಗಾ ಅಪಶಕುನ ಎಂದು ಭಾವಿಸಿ ಆರ್‌ಎಸ್‌ಎಸ್‌ ಧ್ವಜಾರೋಹಣ ಮಾಡಿರಲಿಲ್ಲ. ಕೋಮುವಾದಿಗಳು ಇತ್ತೀಚೆಗೆ ದೇಶಭಕ್ತಿಯ ಮಾತನಾಡಲು ಶುರುಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಕೊಡುಗೆಯನ್ನು ದೇಶದ ಜನತೆ ಮರೆತಿಲ್ಲ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಸ್ಮರಿಸುತ್ತಲೇ ಸಾವರ್ಕರ್ ರನ್ನು ದೇಶಭಕ್ತ ಎಂದು ಬಿಂಬಿಸಲು ಹೊರಟಿರುವ ಬಿಜೆಪಿಗೆ ಸ್ವಾತಂತ್ರ್ಯ ಸಂಭ್ರಮಾಚರಿಸುವ ಯಾವ ನೈತಿಕತೆಯೂ ಇಲ್ಲ. ನಿಜವಾದ ದೇಶಭಕ್ತರು ನಾವು ಕಾಂಗ್ರೆಸ್ ನವರು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *