ಹುಬ್ಬಳ್ಳಿ : ಸಾವರ್ಕರ್ ಭಾವಚಿತ್ರ ಸುಟ್ಟ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿದರು. ಒಂದು ಕಡೆ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು, ಇನ್ನೊಂದು ಕಡೆ ಮೋದಿ ಡೌನ್ ಡೌನ್ ಎಂದು ಘೋಷಣೆ ಹಾಕುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು. ಇದೇ ವೇಳೆ
ಧಾರವಾಡ ಜಿಲ್ಲಾಧ್ಯಕ್ಷ ಸಂಜೀವ್ ಕಪಟಕರ್ ಸೇರಿದಂತೆ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಅಲ್ಲದೇ ಹುಬ್ಬಳ್ಳಿಗೆ ಆಗಮಿ ಸಿದ್ದ ಮಾಜಿ ಸಚಿವ ಎಮ್. ಬಿ. ಪಾಟೀಲ್ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಹುಬ್ಬಳ್ಳಿಯ ಕಲಘಟಗಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

