ಧಾರವಾಡ : ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಭಾವಚಿತ್ರ ವಿವಾದ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ .

ಈ ವಿವಾದ ಇನ್ನೂ ಹಸಿರಿರುವಾಗಲೇ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಲಾಗಿದೆ .
101 ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯ ಮೆರಗು ಹೆಚ್ಚಿಸಿದರಲ್ಲದೇ ಈ ಮೆರವಣಿಗೆಗೆ ಶಾಸಕ ಅಮೃತ ದೇಸಾಯಿ ಅವರೇ ಚಾಲನೆ ನೀಡಿದರು .
ಚಕ್ಕಡಿಯಲ್ಲಿ ಸಾವರ್ಕರ್ ಭಾವಚಿತ್ರವನ್ನಿಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು . ಅಲ್ಲದೇ ಸಾವರ್ಕರ್ ಪರ ಘೋಷಣೆಗಳನ್ನು ಕೂಗಿ ಸಾವರ್ಕರ್ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲಾಯಿತು .
bigtvnews | Hubli Dharwad News | Kannada News | Karnataka News Hubli News | News In Hubli | Local news

