Breaking News

ಕರ್ತವ್ಯ ಲೋಪ ಇಬ್ಬರು ಪೊಲೀಸರನ್ನು ಅಮಾನತ್ತುಗೊಳಿಸಿದ ಎಸ್‌ಪಿ

ಧಾರವಾಡ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಿಂದ ಹಾವೇರಿ ಜಿಲ್ಲೆಗೆ ರಸ್ತೆ ಮುಖಾಂತರ ಹೋಗುವ ಸಂದರ್ಭದಲ್ಲಿ ಬಂದೋಬಸ್ತ್ಗಾಗಿ ನಿಯೋಜಿಸಲಾಗಿದ್ದ ಇಬ್ಬರು ಪೊಲೀಸರು ಕರ್ತವ್ಯಕ್ಕೆ ತಡವಾಗಿ ಬಂದಿದ್ದಕ್ಕೆ ಆ ಇಬ್ಬರೂ ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ .

ಧಾರವಾಡ ಮಹಿಳಾ ಪೊಲೀಸ್ ಠಾಣೆಯ ಹವಾಲ್ದಾರ ಸುರೇಶ ಹುಡೇದ ಹಾಗೂ ಅಣ್ಣಿಗೇರಿ ಪೊಲೀಸ್ ಠಾಣೆಯ ರಾಜೀವ್ ಶಿರುಂದ ಎಂಬುವವರೇ ಅಮಾನತ್ತುಗೊಂಡ ಪೊಲೀಸರು . ತಮಗೆ ನಿಯೋಜಿಸಿದ್ದ ಕರ್ತವ್ಯಕ್ಕೆ ತಡವಾಗಿ ಬಂದು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇಬ್ಬರೂ ಪೊಲೀಸರನ್ನು ಅಮಾನತ್ತುಗೊಳಿಸಿದ್ದಾರೆ

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *