Breaking News

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ನಾವು ಬಿಡಲ್ಲ : ಶ್ರೀರಾಮುಲು ವಾಗ್ದಾಳಿಬೆಂ


ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ): ಸಿದ್ದರಾಮಯ್ಯ ಅವರಿಗೆ ಇವತ್ತು ಇರೋದು ಕೇವಲ ಸಿಎಂ ಕುರ್ಚಿ ಚಿಂತೆಯಷ್ಟೇ. ಅವರನ್ನು ಮುಖ್ಯಮಂತ್ರಿಯಾಗಲು ನಾವು ಬಿಡಲ್ಲ. ಭಾರತೀಯ ಜನತಾ ಪಾರ್ಟಿ ಗಟ್ಟಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಾರಿಗೆ ಸಚಿವ ಬಿ ಶ್ರೀರಾಮುಲು ವಾಗ್ದಾಳಿ ನಡೆಸಿದರು.

ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರಿಗೆ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಸಮಿತಿಯಿಂದ ಸನ್ಮಾನ ಮಾಡಲಾಯಿತು. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಸಮಿತಿಗೆ ನಾನು ಅಭಿನಂದನೆ ಸಲ್ಲಿಸುವೆ. ಇವತ್ತು ಮನುಷ್ಯರಿಗೆ ಊಟ ಹಾಕುವುದೇ ಕಷ್ಟ. ಆದರೆ, ಮುನಿರಾಜು ಅವರು ಪ್ರಾಣಿ -ಪಕ್ಷಿಗಳಿಗೆ ದಾಸೋಹ ಮಾಡುತ್ತಿದ್ದಾರೆ. ಅವರ ಸೇವೆಗೆ ನಾನು ಮೆಚ್ಚುಗೆ ವ್ಯಕ್ತಪಡಿಸುವೆ ಎಂದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *