Breaking News

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಮಹತ್ವದ ತೀರ್ಪು


ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ರಾಜ್ಯ ಸರಕಾರಕ್ಕೆ ಶುಕ್ರವಾರ ಅನುಮತಿ ನೀಡಿದೆ.ಆಗಸ್ಟ್‌ 31ರಿಂದ ನಿರ್ದಿಷ್ಟ ಅವಧಿಗೆ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ.ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಹೈಕೋರ್ಟ್ ಈ ತೀರ್ಪು ನೀಡಿದೆ.

ನಿನ್ನೆ , ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರ, ವಕ್ಫ್ ಮಂಡಳಿ ಹಾಗೂ ಬಿಬಿಎಂಪಿಗೆ ನಿರ್ದೇಶನ ನೀಡಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠ, ಮೈದಾನವನ್ನು ಆಟದ ಬಳಕೆಗಷ್ಟೇ ಸೀಮಿತಗೊಳಿಸಬೇಕು ಹಾಗೂ ರಮ್ಜಾನ್‌ ಮತ್ತು ಬಕ್ರೀದ್‌ ಹಬ್ಬಕ್ಕೆ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಸಮುದಾಯಕ್ಕೆ ಅವಕಾಶ ಕಲ್ಪಿಸಬೇಕು. ಈ ಎರಡು ದಿನ ಹೊರತುಪಡಿಸಿ ಮತ್ಯಾವುದೇ ದಿನ ಪ್ರಾರ್ಥನೆಗೆ ಅವಕಾಶವಿಲ್ಲ ಮಧ್ಯಂತರ ಆದೇಶ ನೀಡಿತ್ತು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *