Breaking News

ಸೂತಕದ ಮನೆಗೆ ನೇರವಾದ ಶಾಸಕ ಜಿ ಟಿ ದೇವೇಗೌಡ

ಮೈಸೂರು: ತಾಲೂಕಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆ ಮಾವಿನಹಳ್ಳಿಯ ಗ್ರಾಮಸ್ಥರೊಬ್ಬರನ್ನು ಬಲಿ ಪಡೆದಿದೆ.

ಜಯಪುರ ಗ್ರಾಮದ ಕಗ್ಗೆರೆ ಕೆರೆ ಶುಕ್ರವಾರ ಭರ್ತಿಯಾಗಿ ಕೋಡಿ ಹರಿದಿತ್ತು. ಇದರ ಸಮೀಪದಲ್ಲಿ ರಸ್ತೆ ದಾಟುವಾಗ ಮಾವಿನಹಳ್ಳಿಯ ಮಹೇಶ (45) ಎಂಬವರು ನೀರುಪಾಲಾಗಿದ್ದಾರೆ. ವಿಷಯ ತಿಳಿದು ಶಾಸಕ ಜಿ ಟಿ ದೇವೇಗೌಡರು ಮೃತ ಗ್ರಾಮಸ್ಥನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತನ ಪತ್ನಿಗೆ ವೈಯಕ್ತಿಕ 50 ಸಾವಿರ ರೂ.ಗಳ ನೆರವು ನೀಡಿ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಕೊಡಿಸುವ ಭರವಸೆ ನೀಡಿದರು. ಸ್ಥಳದಿಂದಲೇ ಜಿಲ್ಲಾಧಿಕಾರಿ ಜೊತೆ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ ಪ್ರಾಕೃತಿಕ ವಿಕೋಪದಡಿ ಗ್ರಾಮಸ್ಥನಿಗೆ ನೆರವು ಕಲ್ಪಿಸುವಂತೆ ಸೂಚಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *