ಹುಬ್ಬಳ್ಳಿ: ನಗರದ ಗದಗ ರಸ್ತೆಯ ಶಬರಿ ನಗರ ಮಧರ್ ಥೆರೇಸಾ ಕಾಲೋನಿಯಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದ ಕಾರಣ ಇಂದು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ, ನಗರದ ರಾಯಣ್ಣ ಸರ್ಕಲ್ ದಿಂದ ತಹಶೀಲ್ದಾರ ಕಚೇರಿ ಮೂಲಕ ಪ್ರತಿಭಟನೆ ಮಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿ ಎಂದು ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಅಷ್ಟೇ ಅಲ್ಲದೆ ಈ ಶಾಲೆಯಲ್ಲಿ ಮಕ್ಕಳಿಗೆ ಕುಡಿಯುವ ನೀರು ಸೌಲಭ್ಯ, ಶೌಚಾಲಯ ಸೌಲಭ್ಯ, ಶಾಲೆಗೆ ಬಣ್ಣ ಇಲ್ಲ, ಶಾಲೆಯಲ್ಲಿ ಪೀಠೋಪಕರಣಗಳು ಹೀಗೆ ಹಲವಾರು ಸಮಸ್ಯೆಗಳು ಈ ಶಾಲೆಯಲ್ಲಿವೆ. ಆದಷ್ಟು ಬೇಗ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳು ಕೂಡಲೆ ಈ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆಂದು ಎಚ್ಚರಿಕೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

