ಹುಬ್ಬಳ್ಳಿ: ಗಣೇಶ ಚತುರ್ಥಿ ಅಂಗವಾಗಿ ಹುಧಾ ಪೊಲೀಸ್ ಕಮಿಷನರೇಟ್ ಘಟಕದ ಸಿಬ್ಬಂದಿ ನಗರದ ವಿವಿಧೆಡೆ ಪಥಸಂಚಲನ ನಡೆಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಪಥಸಂಚಲನದಲ್ಲಿ ಪೋಲಿಸ್ ಹಲವು ತುಕಡಿಗಳು ಶಿಸ್ತು ಬದ್ದವಾಗಿ ನಡೆದು ಸಾರ್ವಜನಿಕರಿಗೆ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಟ್ಟಿನಲ್ಲಿ ಜಾಗೃತಿ ನಡಿಗೆ ನಡೆದರು. ಇದರೊಂದಿಗೆ ನಗರದ ನಾಗರಿಕರಲ್ಲಿ ಆತ್ಮಸ್ಥೈರ್ಯವನ್ನು ತುಂಬುವ ಪ್ರಯತ್ನ ಮಾಡಿದರು.
ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ನಡೆದ ಪಥಸಂಚಲನ ಚನ್ನಮ್ಮ ವೃತ್ತದಿಂದ ಆರಂಭವಾಗಿ, ಈದ್ಗಾ ಮೈದಾನ, ಲ್ಯಾಮಿಂಗ್ಟನ್ ರಸ್ತೆ, ಕೊಪ್ಪಿಕರ್ ರಸ್ತೆ, ದುರ್ಗದ ಬೈಲ್, ಸಿಬಿಟಿ, ಗಣೇಶಪೇಟೆ ಮುಖಾಂತರ ಸಾಗಿತು.
ಕ್ಷಿಪ್ರ ಕಾರ್ಯಾಚರಣೆ ಪಡೆ, ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ಇದ್ದರು. ಕಮಿಷನರ್ ಲಾಭೂರಾಮ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲ ಬ್ಯಾಕೋಡ್ ಹಾಗೂ ಎಸಿಪಿ, ಇನ್’ಸ್ಪೆಕ್ಟರ್’ಗಳು ಪಾಲ್ಗೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

