ಚಾಮರಾಜನಗರ : ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಜಿಲ್ಲೆಯ ವಿವಿಧೆಡೆ ಮಳೆಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ ಪಿ ಶಿವಕುಮಾರ್ ಅವರನ್ನು ಸಚಿವ ವಿ.ಸೋಮಣ್ಣ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.
ಮೊದಲು ಕೊಳ್ಳೇಗಾಲಕ್ಕೆ ಆಗಮಿಸಿದ ಸಚಿವ ಸೋಮಣ್ಣ, ಎಸ್ಪಿ ಶಿವಕುಮಾರ್ ಸ್ಥಳಕ್ಕೆ ಬಾರದಿರುವ ಬಗ್ಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಿಂದ ನಾನೇ ಬಂದಿದ್ದೀನಿ. ನೀವ್ಯಾಕೆ ಇನ್ನೂ ಬಂದಿಲ್ಲ. ಚಾಮರಾಜನಗರದಿಂದ ಕೊಳ್ಳೇಗಾಲ ಬರೋದಕ್ಕೆ ಎಷ್ಟು ಸಮಯ ಬೇಕು ನಿಮಗೆ ಎಂದು ಗರಂ ಆದರು.
ನಂತರ ಚಾಮರಾಜನಗರಕ್ಕೆ ಬರುವಷ್ಟರಲ್ಲಿ ಮಾಂಬಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲೇ ಶವಸಂಸ್ಕಾರ ಮಾಡಿರುವ ಬಗ್ಗೆ ತಿಳಿಯುತ್ತಿದ್ದಂತೆ ಎಸ್ಪಿಯ ಮೇಲೆ ಮತ್ತೆ ಸಚಿವರು ಕೆಂಡಾಮಂಡಲವಾದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಳಿ ತಪ್ಪುತ್ತಿದೆ. ಏನ್ ಮಾಡ್ತಿದೀರಿ? ನೀವು ಸ್ಥಳದಲ್ಲಿದ್ದು ಯಾಕೆ ಪರಿಸ್ಥಿತಿಯನ್ನು ನಿಯಂತ್ರಿಸಲಿಲ್ಲ? ಗ್ರಾಮಸ್ಥರನ್ನು ಯಾಕೆ ಮನವೊಲಿಸಲಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news

