ಮಂಡ್ಯ : ಜಿಲ್ಲೆಯ ಪಾಂಡವಪುರ ತಾಲೂಕಿನ ಮಹದೇವಪುರದಲ್ಲಿ ರಾತ್ರಿ ಲಾರಿಯೊಂದು ಮೂರು ಎತ್ತಿನಗಾಡಿಗಳಿಗೆ ಡಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದೆ.
ನಾಗಮಂಗಲ ಕಡೆಯಿಂದ ಶ್ರೀರಂಗಪಟ್ಟಣ ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಪಾಂಡವಪುರದ ಮಹದೇವಪುರದಲ್ಲಿ ಮೂರು ಎತ್ತಿನಗಾಡಿಗಳಿಗೆ ಡಿಕ್ಕಿ ಹೊಡೆದಿದ್ದು, ಐದು ಎತ್ತುಗಳು ಸ್ಥಳದಲ್ಲೇ ಸಾವಿಗೀಡಾಗಿವೆ. ಮತ್ತೊಂದೆಡೆ ಮೂವರು ರೈತರು ಮತ್ತು ಒಂದು ಎತ್ತಿಗೆ ಗಾಯಗಳಾಗಿವೆ. ಅಪಘಾತ ವಾಗುತ್ತಿದ್ದಂತೆ ತಕ್ಷಣವೇ ಲಾರಿ ಚಾಲಕ ಪರಾರಿಯಾಗಿದ್ದಾನೆ.ಈ ಪ್ರಕರಣ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

