ಅರಾವಳಿ(ಗುಜರಾತ್): ಬೆಳ್ಳಂಬೆಳಗ್ಗೆ ವಿಧಿಯಾಟಕ್ಕೆ ಆರು ಮಂದಿ ಭಕ್ತರು ದುರ್ಮರಣ ಹೊಂದಿದ ಘಟನೆ ಗುಜರಾತ್ನಲ್ಲಿ ನಡೆದಿದೆ. ಅರಾವಳಿ ಜಿಲ್ಲೆಯ ಮಾಲ್ಪುರ್ ಎಂಬಲ್ಲಿನ ಕೃಷ್ಣನಗರದ ಅಂಬಾಜಿ ದೇವಸ್ಥಾನಕ್ಕೆ ನಡೆದುಕೊಂಡು ಹೋಗ್ತಿದ್ದ ಭಕ್ತರ ಮೇಲೆ ವೇಗವಾಗಿ ಬಂದ ಇನ್ನೋವಾ ಕಾರು ಹರಿದಿದೆ. ಪರಿಣಾಮ, ಆರು ಮಂದಿ ಸಾವಿಗೀಡಗಿದ್ದಾರೆ.
ಅಲ್ಲದೇ ಇತರೆ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತರೆಲ್ಲರೂ ದಾಹೋದ್ನ ಲಿಮ್ಖೇಡಾ ಮತ್ತು ಮಾಲ್ಪುರದವರು ಎಂದು ಗುರುತಿಸಲಾಗಿದೆ.
ಪರಿಹಾರ ಘೋಷಿಸಿದ ಮುಖ್ಯಮಂತ್ರಿ: ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಕುಟುಂಬಗಳಿಗೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರಿಗೆ 4 ಲಕ್ಷ ರೂ ಹಾಗೂ ಗಾಯಗೊಂಡಿರುವರಿಗೆ 50 ಸಾವಿರ ರೂ. ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಘಟನೆಯ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

