Breaking News

ನೇರ, ನಿಷ್ಠುರವಾಗಿ ಮಾತನಾಡುವ ವ್ಯಕ್ತಿ ಉಮೇಶ ಕತ್ತಿ: ಸಚಿವರ ನಿಧನಕ್ಕೆ ಶೆಟ್ಟರ್ ಸಂತಾಪ

ಹುಬ್ಬಳ್ಳಿ: ನಮ್ಮ ಜೊತೆಗೆ ಆತ್ಮೀಯವಾದ ಸಂಬಂಧ ಇತ್ತು. ನೇರವಾಗಿ ಮಾತನಾಡುವಂತ ವ್ಯಕ್ತಿತ್ವ ಅವರದ್ದು. ಮನಸ್ಸಿಗೆ ಬಂದಂತೆ, ಸ್ಪಷ್ಟವಾಗಿ ಹೇಳುವಂತ ವ್ಯಕ್ತಿ ಅವರು ಎಂದು ಸಚಿವ ಉಮೇಶ್ ಕತ್ತಿ ನಿಧನಕ್ಕೆ ಜಗದೀಶ್ ಶೆಟ್ಟರ್ ಸಂತಾಪ ಸೂಚಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಮತ್ತು ಬೆಳಗಾವಿ ಅಭಿವೃದ್ಧಿ ಬಗ್ಗೆ ಕನಸುಗಳನ್ನು ಕಂಡವರು ಅವರು. ಅವರ ಅಗಲಿಕೆ ರಾಜ್ಯಕ್ಕೆ ಬಹಳಷ್ಟು ನಷ್ಟವಾಗಿದೆ. ಅವರು ಸಾವು ನಮಗೆ ನೋವು ತಂದಿದೆ ಎಂದರು.

ನೀರಾವರಿ ವಿಚಾರವಾಗಿ ಬಹಳಷ್ಟು ನಿಷ್ಠುರವಾಗಿ ಮಾತನಾಡುತ್ತಿದ್ದರು. ಪಕ್ಷದ ಬಗ್ಗೆ ಸದಾ ಯೋಚನೆಯನ್ನು ಮಾಡುತ್ತಿದ್ದರು. ಸಕ್ಕರೆ ಕಾರ್ಖಾನೆ ತೆಗೆದು ಸಾಕಷ್ಟು ಜನರಿಗೆ ಉದ್ಯೋಗ ನೀಡಿದ ಮಹಾನ ವ್ಯಕ್ತಿ ಅವರು, ಕತ್ತಿಯವರ ಆತ್ಮಕ್ಕೆ ಭಗವಂತ ಆತ್ಮಕ್ಕೆ ಶಾಂತಿ‌ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *