ರಾಜ್ಯದ ಹಿರಿಯ ರಾಜಕಾರಣಿ, ಅತಿ ಹೆಚ್ಚು ಬಾರಿ ಚುನಾವಣೆಯಲ್ಲಿ ಗೆದ್ದಿದ್ದ ಶ್ರೀ ಉಮೇಶ ಕತ್ತಿಯವರ ನಿಧನದಿಂದ ರಾಜ್ಯ ಬಡವಾಗಿದೆ.ಉಮೇಶ ಕತ್ತಿಯವರ ನಡೆ-ನುಡಿ, ನೇರ ಮಾತುಕತೆಯಿಂದ ರಾಜೀ ಇಲ್ಲದ ಜೀವನ ಸಾಗಿಸಿದ್ದರು.
ನಾನು ರಾಜಕಾರಣಕ್ಕೆ ಬರುವುದಕ್ಕಿಂತಲೂ ಮೊದಲು ಅವರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದೆ. ಬಹಳ ವರ್ಷದಿಂದ ಅವರನ್ನ ಹತ್ತಿರದಿಂದ ನೋಡಿಕೊಂಡು ಬಂದಿದ್ದೇನೆ.
ಉಮೇಶ ಕತ್ತಿಯವರ ನಿಧನದಿಂದ ಸಮಾಜಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ನೋವನ್ನ ಭರಿಸಿಕೊಳ್ಳುವ ಶಕ್ತಿಯನ್ನ ಭಗವಂತ ಅವರ ಕುಟುಂಬಕ್ಕೆ ನೀಡಲಿ.
bigtvnews | Hubli Dharwad News | Kannada News | Karnataka News Hubli News | News In Hubli | Local news

