ಧಾರವಾಡ : ಹಿಂದೂ , ಮುಸ್ಲಿಂ ಭಾಯಿ ಭಾಯಿ ಎಂಬುದಕ್ಕೆ ಧಾರವಾಡ ಮತ್ತೊಮ್ಮೆ ಸಾಕ್ಷಿಯಾಗಿದೆ . ಧಾರವಾಡದಲ್ಲಿ ಮುಸ್ಲಿಂ ಯುವಕರು ಗಣೇಶ ವಿಸರ್ಜನೆಯಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ಧತೆಗೆ ಮತ್ತೊಮ್ಮೆ ಸಾಕ್ಷಿಯಾಗಿದ್ದಾರೆ .
ಹೌದು ! ನಾಳೆ ಹುಣ್ಣಿಮೆ ಇರುವುದರಿಂದ 11 ನೇ ದಿನದ ಗಣೇಶನನ್ನು ವಿಸರ್ಜನೆ ಮಾಡಲು ಕೊಂಡೊಯ್ಯಲಾಗುತ್ತಿತ್ತು . ಮೆರವಣಿಗೆ ಮೂಲಕ ತರಲಾಗುತ್ತಿದ್ದ ಗಣೇಶನ ಮೂರ್ತಿ ಧಾರವಾಡದ ಮದನಿ ಮಸೀದಿ ಎದುರಿಗೆ ಬರುತ್ತಿದ್ದಂತೆ ಮುಸ್ಲಿಂ ಯುವಕರು ಗಣೇಶನ ಮೂರ್ತಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದ್ದಾರೆ . ಮುಜಮಿಲ್ ಪಠಾಣ್ ನೇತೃತ್ವದಲ್ಲಿ ಮುಸ್ಲಿಂ ಯುವಕರ ತಂಡ ಗಣೇಶನಿಗೆ ಮಾಲಾರ್ಪಣೆ ಮಾಡುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ .
ಅಷ್ಟೇ ಅಲ್ಲದೇ ಘೋಷಣೆಗಳನ್ನು ಕೂಗಿ ಸಂಭ್ರಮದಿಂದಲೇ ಗಣೇಶನಿಗೆ ವಿದಾಯ ಹೇಳಿದ್ದಾರೆ . ಒಟ್ಟಾರೆ ಧಾರವಾಡ ಸೌಹಾರ್ಧತೆಗೆ ಮತ್ತೊಂದು ಬಾರಿ ಸಾಕ್ಷಿಯಾದಂತಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

