ಹುಬ್ಬಳ್ಳಿ: ತಮ್ಮ ಬಿಜಿ ಶಡ್ಯೂಲನಲ್ಲಿ ಪೊಲೀಸ್ ಅಧಿಕಾರಿ ಕರ್ತವ್ಯದ ಜೊತೆಗೆ, ದೊಡ್ಡಾಟ ಪ್ರದರ್ಶನ ಮಾಡಿ ಕೆಲಸದ ಜೊತೆಗೆ ದೇಶದ ರಕ್ಷಣೆ ಜೊತೆಗೆ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದ್ದಾರೆ.

ಹೀಗೆ ಕೈಯಲ್ಲಿ ಧನಸ್ಸು ಹಿಡಿದು ಎದುರಾಳಿ ಎದೆ ನಡುಗುವಂತೆ ಸಂಭಾಷಣೆ ನಡೆಸಿರುವ ಇವರು ಜೆ.ಎಮ್.ಕಾಲಿಮಿರ್ಚಿ ಹುಬ್ಬಳ್ಳಿಯ ಗೋಕುಲರಸ್ತೆ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್. ತಮ್ಮ ಶಿಸ್ತು ಬದ್ದ ಕಾರ್ಯದಿಂದ ಅಪರಾಧಿಗಳ ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟುವ ಕೆಲಸ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಇದೀಗ ಇನ್ಸ್ಪೆಕ್ಟರ್ ಜೆ.ಎಮ್.ಕಾಲಿಮಿರ್ಚಿ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ ನಲ್ಲಿ ಜಾನಪದ ಕಲಾ ಬಳಗ ಟ್ರಸ್ಟ್ ನಿಂದ ರವಿವಾರ ನಡೆದ ಕರ್ಣಪರ್ವ ದೊಡ್ಡಾಟ ಪ್ರದರ್ಶನದಲ್ಲಿ ವೃಷಸೇನ ಪಾತ್ರದಲ್ಲಿ ವೇಷ ಧರಿಸಿ ಅದ್ಭುತವಾಗಿ ನಟನೆ ಮಾಡುವ ಮೂಲಕ ಪ್ರೇಕ್ಷಕರ ಪ್ರೀತಿಗೆ ಪಾತ್ರರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

