ಬೆಂಗಳೂರು : ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನನ್ನು ಮಂಜೂರು ಮಾಡಿ ಶೀಘ್ರವಾಗಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನ ವೈಯಾಲಿಕಾವಲ್ ನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಮುದಾಯ ಭವನಕ್ಕೆ ಎರಡು ಕಂತುಗಳಲ್ಲಿ 5 ಕೋಟಿ ರೂ ಒದಗಿಸಿ, 4 ನಾರಾಯಣ ಗುರುಗಳ ವಸತಿ ಶಾಲೆಗೆ 30 ರಿಂದ 40 ಕೋಟಿ ರೂ. ಒದಗಿಸಲಾಗುವುದು. ಸಮಾಜದ ಬಡ ಮಕ್ಕಳಿಗೆ ನೀಡುವ ಕಾರ್ಯ ಇದೇ ವರ್ಷ ಆರಂಭವಾಗುತ್ತದೆ ಎಂದು ಹೇಳಿದರು.
ನಾರಾಯಣ ಗುರುಗಳ ವಿಚಾರಧಾರೆ ಸರ್ವ ಕಾಲಕ್ಕೂ ಅವಶ್ಯಕ. ಅತ್ಯಂತ ಮಾನವೀಯ ತಳಹದಿಯ ಮೇಲೆ ಬದುಕನ್ನು ಯಾವ ರೀತಿ ನಡೆಸಬೇಕು ಎನ್ನುವುದನ್ನು ಮಾರ್ಮಿಕವಾಗಿ ಬದುಕಿ ತೋರಿಸಿದವರು. ಈ ದೇಶ-ವಿಶ್ವದಲ್ಲಿ ನಾವು ಹಲವಾರು ಧರ್ಮ, ಜಾತಿಗಳನ್ನು ನೋಡಿದ್ದೇವೆ. ಎಲ್ಲ ಧರ್ಮ ಜಾತಿಗಳು ಮಾನವೀಯ ಗುಣಗಳನ್ನು ಒಳಗೊಂಡಿವೆ. ನಮ್ಮಲ್ಲಿ ಸುಖ, ಶಾಂತಿ, ನೆಮ್ಮದಿ, ವಿಶ್ವಾಸ, ದಯೆಯಿಂದ ತುಂಬಿರಬೇಕು ಎನ್ನುವುದು ಮಾನವೀಯ ಗುಣ. ಮನುಷ್ಯ ಮತ್ತು ಮಾನವನ ನಡುವೆ ವ್ಯತ್ಯಾಸವಿದೆ. ಕೆಲವೇ ಕೆಲವರು ಮಾನವರಾಗಿ, ಇನ್ನೂ ಕೆಲವರು ಅತ್ಯಂತ ಯುಗಪುರುಷರಾಗಿ ದೇವ ಮಾನವರಾಗುತ್ತಾರೆ. ಅಂತಹ ದೇವ ಮಾನವರಾಗಿರುವವರು ನಾರಾಯಣ ಗುರುಗಳು ಎಂದು ಸಿಎಂ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

