Breaking News

ರೈತರಿಗೆ ಸಿಹಿ ಸುದ್ದಿ



ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರ ಖಾತೆಗೆ ಪರಿಹಾರದ ಮೊತ್ತ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಮತ್ತು ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಬಿ.ಸಿ. ಪಾಟೀಲ್ ಅವರು, 7,61,438.86 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಗೀಡಾಗಿದ್ದು, 1.04 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ 116.38 ಕೋಟಿ ಜಮಾ ಮಾಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅತಿವೃಷ್ಠಿ ಕಾರಣ ಬೆಳೆ ಹಾನಿಗೆ ಸಂಬಂಧಿಸಿದಂತೆ ಕೇಂದ್ರದ ಅಧಿಕಾರಿಗಳ ತಂಡ ಅಧ್ಯಯನ ನಡೆಸಿದ್ದು, ಮಳೆ ಹಾನಿ ಸಂಬಂಧ 7500 ಕೋಟಿ ರೂ. ಪರಿಹಾರ ಕೇಳಿದ್ದೇವೆ. ಇದುವರೆಗೆ 325 ಕೋಟಿ ರೂ. ಪರಿಹಾರ ಬಂದಿದ್ದು, ಉಳಿದ ಪರಿಹಾರ ಕೂಡ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *