Breaking News

ಭೋವಿ ಸಮುದಾಯದ ಮತ್ತಷ್ಟು ಅಭಿವೃದ್ಧಿಗಾಗಿ ಭೂಮಿ ಮಂಜೂರಿ : ಸಿಎಂ


ಬೆಂಗಳೂರು: ಭೋವಿ ಸಮುದಾಯದ ಮತ್ತಷ್ಟು ಅಭಿವೃದ್ಧಿಗಾಗಿ ಭೂಮಿ ನೀಡಬೇಕೆಂಬ ಬೇಡಿಕೆಯನ್ನು ಪರಿಗಣಿಸಿ ಸರ್ಕಾರ ನೆರವು ನೀಡಲಿದೆ. ಇಂತಹ ಸಂಘಗಳಿಗೆ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆಸ್ಟಿನ್‌ಟೌನ್‌ನ ಜಸ್ಮಾದೇವಿ ಮಂದಿರ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದ “ಸುವರ್ಣ ಮಹೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿರು.

ಸಂಘದ ಅಧ್ಯಕ್ಷ ರಘು ಅವರು ದೊಡ್ಡ ಕೆಲಸಗಳನ್ನು ಮಾಡಲು ಭೂಮಿಯನ್ನು ಕೇಳಿದ್ದಾರೆ. ಅದಕ್ಕೆ ಕಂದಾಯ ಸಚಿವರು ಒಪ್ಪಿಗೆ ಕೊಟ್ಟಿದ್ದಾರೆ. ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಇದಕ್ಕೆ ಆಶೀರ್ವಾದ ಮಾಡಿದ್ದಾರೆ. ಮುಂದೆ ನನ್ನದೇನೂ ಹೆಚ್ಚಿನ ಕೆಲಸವಿಲ್ಲ. ಆದಷ್ಟು ಬೇಗ ನಿಮ್ಮ ಮನೋ ಇಚ್ಛೆ ಕಾಮನೆಗಳು ಪೂರ್ತಿಯಾಗಲಿ ಎಂದು ಹಾರೈಸಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *