ನವದೆಹಲಿ/ಗಾಜಿಯಾಬಾದ್: ನಿಯಂತ್ರಣ ಕಳೆದುಕೊಂಡ ಆಯಂಬುಲೆನ್ಸ್ ಕೆಲ ವಾಹನಗಳಿಗೆ ಡಿಕ್ಕಿ ಹೊಡೆದು ಓರ್ವ ಮಹಿಳೆ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ.
ಘಟನೆಯಲ್ಲಿ ಮಗು ಸೇರಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಗಾಜಿಯಾಬಾದ್ನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತಾಪ್ ವಿಹಾರ್ ಪ್ರದೇಶದಲ್ಲಿ ದುರ್ಘಟನೆ ನಡೆದಿದೆ.
ಪೊಲೀಸರು ಈಗಾಗಲೇ ಆಯಂಬುಲೆನ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆಯಂಬುಲೆನ್ಸ್ ಅನ್ನು ಅತಿ ವೇಗವಾಗಿ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

