ಬೆಂಗಳೂರು: ಕಾರ್ಮಿಕರ ಕಲ್ಯಾಣ ನಮ್ಮ ಮೊದಲ ಆದ್ಯತೆ. ಕಾರ್ಮಿಕರ ಏಳಿಗೆಗೆ ಬೇಕಾಗುವ ಎಲ್ಲ ಯೊಜನೆಗಳನ್ನು ನಾವು ಜಾರಿಗೆ ತರುತ್ತೇವೆ. ಅವರ ಶ್ರಮಕ್ಕೆ ಬೆಲೆ ಕೊಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಕಾರ್ಮಿಕ ಇಲಾಖೆಯ ವತಿಯಿಂದ ವಿಧಾನಸೌಧದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನೂತನ ತಂತ್ರಾಂಶ ಉದ್ಘಾಟನೆ ಹಾಗೂ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆ ಮತ್ತು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಂಡು ಮಾತನಾಡಿದರು.
ಕಾರ್ಮಿಕರು ಈ ದೇಶದ ಪ್ರಗತಿಯ ಚಕ್ರದ ರೂವಾರಿಗಳು. ನಾವು ಹಣ ಹೂಡಿಕೆ ಮಾಡಿ ಲೆಕ್ಕ ಹಾಕುತ್ತೇವೆ. ಆದರೆ ಕಾರ್ಮಿಕರ ಶ್ರಮವನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ. ನಿಜವಾದ ಬದಲಾವಣೆ, ಪರಿವರ್ತನೆ ತರುವವರು ಕಾರ್ಮಿಕರು. ಅಂತಹ ಕಾರ್ಮಿಕರಿಗೆ ಬದುಕಿನ ಭರವಸೆ ಕೊಡಬೇಕು. ಕಾರ್ಮಿಕನ ಬದುಕಿಗೆ ಒಂದು ಸ್ಪೂರ್ತಿಯನ್ನು ಕೊಟ್ಟಾಗ ಅವನು ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡುತ್ತಾನೆ. ಆತಂಕದಲ್ಲಿ ಯಾರು ನೂರಕ್ಕೆ ನೂರರಷ್ಟು ಶ್ರಮ ಕೊಡಲು ಸಾಧ್ಯವಿಲ್ಲ. ಹೀಗಾಗಿ ಅವನ ಶ್ರಮಕ್ಕೆ ಬೆಲೆ ಬರಬೇಕು ಎನ್ನುವ ದೃಷ್ಠಿಯಿಂದ ಕಾರ್ಮಿಕ ಕಟ್ಟಡ ನಿಧಿ ಕಾರ್ಯಕ್ರಮವನ್ನು ಕಾರ್ಮಿಕ ಇಲಾಖೆ ಸಚಿವರು ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

