Breaking News

ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ಮಹತ್ವದ ಮಾಹಿತಿ



ನವದೆಹಲಿ: 2002ರ ಗೋಧ್ರಾ ನಂತರದ ಗಲಭೆಗೆ ಸಂಬಂಧಿಸಿದಂತೆ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಮರಣದಂಡನೆ ವಿಧಿಸಲು ತೀಸ್ತಾ ಸೆಟಲ್ವಾಡ್ ಸಂಚು ರೂಪಿಸಿದ್ದರು ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ಚಾರ್ಜ್‌ ಶೀಟ್‌ ನಲ್ಲಿ ಆರೋಪಿಸಲಾಗಿದೆ.

ಸೆಟಲ್ವಾಡ್, ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್.ಬಿ.ಶ್ರೀಕುಮಾರ್ (ನಿವೃತ್ತ) ಮತ್ತು ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) ಮಾಜಿ ಅಧಿಕಾರಿ ಸಂಜೀವ್ ಭಟ್ ವಿರುದ್ಧ 100 ಪುಟಗಳ ಸುದೀರ್ಘ ಚಾರ್ಜ್‌ ಶೀಟ್‌ ಅನ್ನು ಅಹಮದಾಬಾದ್ ಮೆಟ್ರೋ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಎಸ್‌ಐಟಿಯ ಪ್ರಕಾರ, ಆರೋಪಿಗಳು ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಮರಣದಂಡನೆ ವಿಧಿಸಲು ಸಂಚು ರೂಪಿಸಿದ್ದರು ಎಂದು ಉಲ್ಲೇಖಿಸಲಾಗಿದೆ. ಸರ್ಕಾರದ ಭಾಗವಾಗಿದ್ದರೂ, ಆರ್ . ಬಿ ಶ್ರೀಕುಮಾರ್ ಮತ್ತು ಸಂಜೀವ್ ಭಟ್ ಅವರು ತೀಸ್ತಾಗಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಂತರ ಅವುಗಳನ್ನು ಅಧಿಕೃತ ನಮೂದುಗಳಿಗೆ ಸೇರಿಸಿದ್ದಾರೆ ಎಂದು ಅದು ಹೇಳಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *