ಬೆಂಗಳೂರು: ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸುತ್ತಿದ್ದಾರೆ.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ನಡೆಸುತ್ತಿರುವ ಯಾತ್ರೆ ರಾಜ್ಯದಲ್ಲಿ ಸೆ.30ರಂದು ಬೆಳಗ್ಗೆ 9ಕ್ಕೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಿಂದ ಆರಂಭವಾಗಲಿದೆ. ಸೋನಿಯಾ ಗಾಂಧಿ ಭಾಗವಹಿಸುವ ದಿನಾಂಕ ಶೀಘ್ರ ನಿರ್ಧರಿಸಲಾಗುವುದು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪಕ್ಷದ ನಾಯಕರು ಯಾತ್ರೆ ಸಾಗುವ ಮಾರ್ಗದ ಸಿದ್ಧತೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಎಲ್ಲಾ ಪ್ರಮುಖ ನಾಯಕರಿಗೂ ಜವಾಬ್ದಾರಿ ನೀಡಲಾಗಿದೆ. ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅ.2ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ, ಬಳ್ಳಾರಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ. ದಸರಾ ಹಬ್ಬದ ಎರಡು ದಿನ ಯಾತ್ರೆ ಇರುವುದಿಲ್ಲ ಎಂದು ವಿವರ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

