Breaking News

ಖ್ಯಾತ ನಟ ರಮೇಶ್ ಅರವಿಂದ್ ಅವರ ಮುಡಿಗೆ ಮತ್ತೊಂದು ಗರಿ


ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಇತ್ತೀಚೆಗಷ್ಟೇ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಶುಭಾಶಯಗಳ ಮಹಾಪೂರವೇ ಹರಿದು ಬಂದಿತ್ತು. ಅಲ್ಲದೆ ಚಿತ್ರರಂಗಕ್ಕೆ ಅವರು ನೀಡಿದ ಸೇವೆಯನ್ನು ಸ್ಮರಿಸಿ ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಾಗಿತ್ತು.

ಇದೀಗ ಅವರ ಮುಡಿಗೆ ಮತ್ತೊಂದು ಗರಿ ಸೇರ್ಪಡೆಯಾಗಿದ್ದು, ಡಾ. ಶಿವರಾಮ ಕಾರಂತರ ಹುಟ್ಟೂರ ಪ್ರಶಸ್ತಿಗೆ ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 10 ರ ಕಾರಂತರ ಜನ್ಮ ದಿನದಂದು ಈ ಪ್ರಶಸ್ತಿಯನ್ನು ರಮೇಶ್ ಅರವಿಂದ್ ಅವರಿಗೆ ಪ್ರದಾನ ಮಾಡಲಾಗುತ್ತದೆ.

ಈಗಾಗಲೇ ಈ ಪ್ರಶಸ್ತಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಎಂ. ವೀರಪ್ಪ ಮೊಯ್ಲಿ, ಲೋಕಾಯುಕ್ತರಾಗಿದ್ದ ವೆಂಕಟಾಚಲಯ್ಯ, ಕಲಾವಿದೆ ಜಯಶ್ರೀ, ಸಾಲುಮರದ ತಿಮ್ಮಕ್ಕ, ಡಾ. ಮೋಹನ್ ಆಳ್ವ, ಯಕ್ಷಗಾನ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ, ಕವಿ ಜಯಂತ ಕಾಯ್ಕಿಣಿ, ಡಾ. ಎಸ್.ಎಲ್. ಭೈರಪ್ಪ, ಪತ್ರಕರ್ತ ರವಿ ಬೆಳಗೆರೆ ಅವರಿಗೆ ಪ್ರದಾನ ಮಾಡಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *