ಮಂಗಳೂರು/ ಉಡುಪಿ/ಕಾಸರಗೋಡು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಸೆ. 26ರಂದು ನವರಾತ್ರಿ, ದಸರಾ ಸಂಭ್ರಮ ಆರಂಭಗೊಳ್ಳಲಿದ್ದು ವಿವಿಧ ದೇವಾಲಯಗಳಲ್ಲಿ ಸಿದ್ಧತೆಗಳು ನಡೆಯುತ್ತಿವೆ.
ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ 9 ದಿನಗಳ ಕಾಲ ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಹತ್ತನೇ ದಿನ ವಿಜಯದಶಮಿ ಕಾರ್ಯಕ್ರಮ ನೆರವೇರಲಿದೆ.ವಿವಿಧ ದೇಗುಲಗಳು ವಿದ್ಯುತ್ ದೀಪ, ಹೂವುಗಳಿಂದ ಶೃಂಗಾರಗೊಂಡಿವೆ.
ದ.ಕ. ಜಿಲ್ಲೆಯ ಪುರಾಣ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಸೇರಿದಂತೆ ವಿವಿಧ ದೇವಿ ಆಲಯಗಳಲ್ಲಿ ನವರಾತ್ರಿಯ ವಿಶೇಷ ಪೂಜೆ ನೆರವೇರಲಿದೆ. “ಮಂಗಳೂರು ದಸರಾ’ ಎಂದೇ ಮನ್ನಣೆ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಾಗೂ ರಥಬೀದಿಯ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 100ನೇ ವರ್ಷದ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

