ಹುಬ್ಬಳ್ಳಿ : ಇಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಡೆಯುತ್ತಿತ್ತು . ಆದ್ರೆ ಸಭೆ ಆರಂಭದಲ್ಲೇ ಮೇಯರ್ ಗೌನ್ ಗದ್ದಲ ಸೃಷ್ಟಿಯಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯ ಮಧ್ಯೆ ಜಟಾಪಟಿ ನಡೆದ Exclusive ವಿಡಿಯೋ ಇಲ್ಲಿದೆ …
ಹೌದು . ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಗೆ ಆಗಮಿಸಿದ್ದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ಮಾಡಿದ್ದರು . ಆದರೆ ಮೇಯರ್ ಈರೇಶ ಅಂಚಟಗೇರಿ ಅವರು ರಾಷ್ಟ್ರಪತಿ ಅವರಿಗೆ ತಮ್ಮ ಗೌನ್ ಇಲ್ಲದೆ ಪೌರ ಸನ್ಮಾನ ಮಾಡಿದ್ದಾರೆಂದು ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಕಿಡಿಕಾರಿದರು . ಗೌನ್ ಧರಿಸದ ಶಿಷ್ಟಾಚಾರಕ್ಕೆ ತಿಲಾಂಜಲಿ ಹಾಡಿರುವ ಮೇಯರ್ ಈರೇಶ ಅಂಚಟಗೇರಿ , ಸಭೆಗೆ ಆಗಮಿಸುತ್ತಿದ್ದಂತೆಯೇ ಮೇಯರ್ ವಿರುದ್ಧ ಕಾಂಗ್ರೆಸ್ ಸದಸ್ಯರು ಹರಿಹಾಯ್ದರು . ಅಷ್ಟೇ ಅಲ್ಲದೆ ಇಂದಿನ ಸಾಮಾನ್ಯ ಸಭೆಗೂ ಕೂಡ ಮೇಯರ್ ಈರೇಶ ಅಂಚಟಗೇರಿ ಅವರು ಗೌನ್ ಧರಿಸದೆ ಬಂದಿದ್ದರು . ಸಭೆಯಲ್ಲಿಯೇ ಪ್ರತಿಭಟನೆಗೆ ಮುಂದಾದ ಕೈ ಸದಸ್ಯರು , ಸಭಾಂಗಣದಲ್ಲಿಯೇ ಧರಣಿಗೆ ಕುಳಿತಿದ್ದಾರೆ .
ಗೌನ್ ಧರಿಸಿಯೇ ಸಭೆ ನಡೆಸಬೇಕೆಂದು ಪಟ್ಟು ಹಿಡಿದು ಕುಳಿತ ಸದಸ್ಯರು . ಮೇಯರ್ ಈರೇಶ ಅಂಚಟಗೇರಿ ಅವರು ಗೌನ್ ಧರಿಸುವುದನ್ನ ಕೈಬಿಟ್ಟು ಅಗೌರವ ತೋರುತ್ತಿದ್ದಾರೆ .
ಮೇಯರ್ ಏಕಪಕ್ಷೀಯ ನಿರ್ಧಾರ ತಗೆದುಕೊಳ್ಳುವ ಮೂಲಕ ಅಗೌರವ ತೋರುತ್ತಿದ್ದಾರೆ . ಗೌನ್ ಧರಿಸಬೇಕು ಇಲ್ಲವೇ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ , ಮೇಯರ್ ವಿರುದ್ಧ ಘೋಷಣೆ ಕೂಗಿ ಸಭೆಯಲ್ಲಿಯೇ ಪ್ರತಿಭಟನೆಗಿಳಿದರು . ಇದರಿಂದಾಗಿ ಸಭೆಯಲ್ಲಿ ಗದ್ದಲ ಉಂಟಾಗಿ ಅರ್ಧ ಗಂಟೆ ಸಭೆಯನ್ನು ಮುಂದೂಡಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

