Breaking News

ಟಿ.ಎಸ್.ಛಾಯಾಪತಿ ನಿಧನ


ಮೈಸೂರು: ಸಾಹಿತಿ ದಿ.ತ.ಸು.ಶಾಮರಾಯ ಅವರ ಪುತ್ರ, ಪ್ರಕಾಶಕ, ಗೋಕುಲಂ ‌ಬಡಾವಣೆ ನಿವಾಸಿ ಟಿ.ಎಸ್.ಛಾಯಾಪತಿ (79)  ರಾತ್ರಿ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ತಳುಕಿನ ವೆಂಕಣ್ಣಯ್ಯ ಗ್ರಂಥಮಾಲೆ‌ ಎಂಬ ಪ್ರಕಾಶನ ನಡೆಸುತ್ತಿದ್ದ ಅವರು, ಸಾವಿರಕ್ಕೂ ಅಧಿಕ ಪುಸ್ತಕಗಳನ್ನು ಪ್ರಕಟಿಸಿದ್ದರು. 25 ಕೃತಿಗಳನ್ನು ತಾವೇ ಬರೆದಿದ್ದರು. ಅವರಿಗೆ ಸರ್ಕಾರದಿಂದ ಅತ್ಯುತ್ತಮ ಪ್ರಕಾಶಕ‌ ಸೇರಿದಂತೆ ಹಲವು‌ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಅಂತ್ಯಕ್ರಿಯೆ ಅ.2 (ಭಾನುವಾರ) ಮಧ್ಯಾಹ್ನ ಗೋಕುಲಂ ಬಡಾವಣೆಯ ರುದ್ರಭೂಮಿಯಲ್ಲಿ‌ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Share News

About BigTv News

Check Also

Featured Video Play Icon

ಬಿ.ಜೆ.ಪಿ. ಬಾವುಟ ತೆರವುಗೊಳಿಸಿದ ಹು-ಧಾರವಾಡ ಮಹಾನಗರ ಪಾಲಿಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ್ಯಾಂತ ಚುನಾವಣೆ ನೀತಿ ಸಂಮೀತೆ ಜಾರಿಗೆ ಇರುವುದರಿಂದ ಬಿಜೆಪಿ ಪಕ್ಷದ ಧ್ವಜವನ್ನು ಇಂದು ಹುಬ್ಬಳ್ಳಿಯಲ್ಲಿ ತೆರವುಮಾಡಲಾಗಿದೆ. …

Leave a Reply

Your email address will not be published. Required fields are marked *

You cannot copy content of this page