Breaking News

ಮಗನಿಗೆ ಸಾಥ್ ಕೊಡಲು ನಾಳೆ ಮೈಸೂರುಗೆ ಸೋನಿಯಾ ಗಾಂಧಿ


ಮೈಸೂರು : ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಜೊತೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ.

ಅಕ್ಟೋಬರ್ 4 ರಂದು ಬೆಳಿಗ್ಗೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಾಳೆ ಮೈಸೂರು ನಗರದಿಂದ Ts ಛತ್ರದವರೆಗೂ ಸಾಗಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ. ನಂತರ ಎಸಿಸಿಸಿ ಅಧ್ಯಕ್ಷ ಚುನಾವಣೆ ಕುರಿತು ರಾಹುಲ್ ಜೊತೆ ಚರ್ಚಿಸಲು ಮಡಿಕೇರಿಗೆ ಸೋಮವಾರ ಮಧ್ಯಾಹ್ನ 12.30ಕ್ಕೆ ಬರಲಿದ್ದಾರೆ. ವಿಮಾನ ನಿಲ್ದಾಣದಿಂದ ಮೈಸೂರಿಗೆ ಆಗಮಿಸಲಿರುವ ಸೋನಿಯಾಗಾಂಧಿ ಅವರು ಸೋಮವಾರದ ಯಾತ್ರೆ ಮುಗಿಸಿ ಹೆಲಿಕ್ಯಾಪ್ಟರ್‌ನಲ್ಲಿ ಮಡಿಕೇರಿಗೆ ಪ್ರಯಾಣಿಸಲಿದ್ದಾರೆ.

ಅ. 4, 5ರಂದು ಕೊಡಗು ಭಾಗದ ರೆಸಾರ್ಟ್​ವೊಂದರಲ್ಲಿ ವಾಸ್ತವ್ಯ ಮಾಡಲಿದ್ದು, ಈ ವೇಳೆಯಲ್ಲಿ ಮುಂಬರುವ ಕರ್ನಾಟಕ ಚುನಾವಣೆ ಸೇರಿದಂತೆ ಇನ್ನಿತರ ಬಗ್ಗೆ ಚರ್ಚೆ ನಡೆಸಲಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *