Breaking News

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಅಧಿಕಾರಕ್ಕಾಗಿ ಹಪಹಪಿಸಲಿಲ್ಲ, ಅವರ ತ್ಯಾಗ ಬಹಳಷ್ಟಿದೆ: ಮಲ್ಲಿಕಾರ್ಜುನ ಖರ್ಗೆ


ನವದೆಹಲಿ : 10 ವರ್ಷ ನಡೆಸಿದ್ದರೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಅಧಿಕಾರಕ್ಕಾಗಿ ಹಪಹಪಿಸಲಿಲ್ಲ. ಅವರ ತ್ಯಾಗ ಬಹಳಷ್ಟಿದೆ ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಕೊಂಡಾಡಿದರು.

ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು. ಇಂತಹ ಸಂದರ್ಭದಲ್ಲಿ ನನಗೆ ಸ್ಪರ್ಧಿಸುವಂತೆ ಅನೇಕರು ಒತ್ತಾಯಿಸಿದರು.

ಹೀಗಾಗಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ನಾನು ಯಾರ ವಿರುದ್ಧವೂ ಸ್ಪರ್ಧೆ ಮಾಡುತ್ತಿಲ್ಲ. ಪಕ್ಷದ ಸಿದ್ಧಾಂತ, ವಿಚಾರಧಾರೆ ಮುಂದಿಟ್ಟುಕೊಂಡು ಸ್ಪರ್ಧೆ ಮಾಡುತ್ತಿದ್ದೇನೆ. ನನ್ನ ಪಕ್ಷದ ಎಲ್ಲರೂ ಸಹಕಾರ ಕೂಡ ಬೇಕು ಎಂದು ಮನವಿ ಮಾಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *