ಉಡುಪಿ: ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇವಸ್ಥಾನಗಳಲ್ಲಿ, ಕೆಲವೊಂದು ಸ್ಥಳಗಳಲ್ಲಿ ವಿಶೇಷವಾದ ಕುಣಿತ, ಸಾಂಸ್ಕೃತಿಕ ಕಾರ್ಯಕ್ರಮ, ವಿಶೇಷ ಪೂಜೆ ನಡೆಯುತ್ತಲೇ ಇರುತ್ತದೆ.
ದಾಂಡಿಯಾ ಕುಣಿತ ಕೂಡ ದಸರಾ ಹಬ್ಬದ ಸ್ಪೆಷಲ್. ಇದೀಗ ದಾಂಡಿಯಾ ಪೆಂಡಾಲ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ್ ಮುತಾಲಿಕ್, ದಾಂಡಿಯಾ ಪೆಂಡಾಲ್ ನಲ್ಲಿ ಮುಸ್ಲಿಂ ಯುವಕರಿಗೆ ಏನು ಕೆಲಸ ಎಂದು ಪ್ರಶ್ನಿಸಿದ್ದಾರೆ.
ಲವ್ ಜಿಹಾದ್ ಮಾಡುವುದಕ್ಕೆ ದಾಂಡಿಯಾ ಪೆಂಡಾಲ್ ಗೆ ಬರುತ್ತಾರೆ. ನಮ್ಮ ಸಮಾಜ ಅವರನ್ನು ಸಂಪೂರ್ಣವಾಗಿ ಬಹಿಷ್ಕಾರ ಮಾಡಬೇಕು. ದಾಂಡಿಯಾ ಹಿಂದೂಗಳ ಧಾರ್ಮಿಕ ಸಂಪ್ರದಾಯ. ಅಲ್ಲಾಹು ಒಬ್ಬನೇ ದೇವರು ಎನ್ನುವವರಿಗೆ ನವರಾತ್ರಿ ಉತ್ಸವದಲ್ಲಿ ಏನು ಕೆಲಸ. ದಾಂಡಿಯಾ ಪೆಂಡಾಲ್ ಗೆ ಮುಸ್ಲಿಂ ಯುವಕರಿಗೆ ನಿರ್ಬಂಧ ಹೇರಬೇಕು ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

