Breaking News

ರಾಜ್ಯದ ಜನತೆಗೆ ಅಂಚೆ ಇಲಾಖೆಯಿಂದ ಸಿಹಿಸುದ್ದಿ


ಬೆಂಗಳೂರು : ರಾಜ್ಯದ ಜನತೆಗೆ ಅಂಚೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಮನೆಬಾಗಿಲಿಗೇ ಜನನ, ಮರಣ ಪತ್ರಗಳು ಬರಲಿವೆ. ಈ ಸಂಬಂಧ ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿದೆ.

ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ ಪತ್ರ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ. ಹೀಗಾಗಿ ಇನ್ಮುಂದೆ ಸಾರ್ವಜನಿಕರು ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ ಹಾಗೂ ಆಸ್ಪತ್ರೆಗಳಿಗೆ ಅಲೆದಾಡಬೇಕಾಗಿಲ್ಲ. ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್ ನಲ್ಲಿ ಮನೆ ಬಾಗಿಲಿಗೆ ಬರಲಿವೆ.

ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಮಾಣ ಪತ್ರಗಳು ಸಿದ್ದವಾಗುತ್ತವೆ. ಹೀಗೆ ತಯಾರಾದ ಪ್ರಮಾಣ ಪತ್ರಗಳನ್ನು ಆಯಾ ಸಂಬಂಧಪಟ್ಟ ನಾಡ ಕಚೇರಿ, ತಾಲೂಕು ಕಚೇರಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಿಗೆ ಅಂಚೆ ಸಿಬ್ಬಂದಿಯೇ ತೆರಳಿ, ಅವುಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *