Breaking News

ದೆಹಲಿ ಸರ್ಕಾರದ ಸಚಿವ ರಾಜೇಂದ್ರ ಪಾಲ್ ಗೌತಮ್ ರಾಜಿನಾಮೆ


ನವದೆಹಲಿ: ಹಿಂದೂ ದೇವರು ಮತ್ತು ದೇವತೆಗಳ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ದೆಹಲಿ ಸರ್ಕಾರದ ಸಚಿವ ರಾಜೇಂದ್ರ ಪಾಲ್ ಗೌತಮ್  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನೂ ಅವರು ಟ್ವೀಟ್ ಮಾಡಿದ್ದಾರೆ.

ಮತ್ತೊಂದೆಡೆ, ಅವರ ರಾಜೀನಾಮೆ ಬಳಿಕ ಬಿಜೆಪಿ ಮತ್ತೊಮ್ಮೆ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದೆ. ಏತನ್ಮಧ್ಯೆ, ಆಜ್ ತಕ್ ಜೊತೆಗಿನ ವಿಶೇಷ ಸಂವಾದದಲ್ಲಿ ರಾಜೇಂದ್ರ ಪಾಲ್ ತಮ್ಮ ರಾಜೀನಾಮೆಯ ಕಾರಣವನ್ನು ನೀಡಿದ್ದಾರೆ. ಇದರೊಂದಿಗೆ ಬಿಜೆಪಿಯನ್ನೂ ಗುರಿಯಾಗಿಸಿದ್ದಾರೆ.

ಸಂವಾದದಲ್ಲಿ ರಾಜೇಂದ್ರ ಪಾಲ್ ಗೌತಮ್ ಅವರು ಬೌದ್ಧ ಧರ್ಮದ ದೀಕ್ಷಾ ಸಮಾರಂಭವನ್ನು ವಿಜಯದಶಮಿಯಂದು ಆಯೋಜಿಸಲಾಗಿದೆ ಎಂದು ಹೇಳಿದರು. ಅಂದು ದೇಶಾದ್ಯಂತ ಸಾವಿರಾರು ಸ್ಥಳಗಳಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಾರೆ. 14 ಅಕ್ಟೋಬರ್ 1956 ರಂದು, ಬಾಬಾಸಾಹೇಬರು ಜಾತಿ ಆಧಾರಿತ ಅಸ್ಪೃಶ್ಯತೆ ವಿರುದ್ಧ 22 ಪ್ರತಿಜ್ಞೆಗಳೊಂದಿಗೆ ಬೌದ್ಧ ಧರ್ಮದ ದೀಕ್ಷೆಯನ್ನು ಪಡೆದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *