Breaking News

ಯಡಿಯೂರಪ್ಪಗೆ ವಯಸ್ಸಾಗಿದೆ ಅವರಿಗೆ ಅರುಳು ಮರುಳಾಗಿರಬಹುದೇನೋ : ಸಿದ್ದರಾಮಯ್ಯ


ಚಿತ್ರದುರ್ಗ : ಯಡಿಯೂರಪ್ಪಗೆ ವಯಸ್ಸಾಗಿದೆ ಅವರಿಗೆ ಅರುಳು ಮರುಳಾಗಿರಬಹುದೇನೋ ಎಂದು ಚಿತ್ರದುರ್ಗದ ಚಳ್ಳೇಕೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಪ್ರಧಾನಿ ಮೋದಿ ಪಾದದ ಧೂಳೀಗೂ ಸಮನಲ್ಲ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಡಿಯೂರಪ್ಪ ಮಟ್ಟಕ್ಕೆ ಹೋಗಿ ನಾನು ಮಾತನಾಡಲ್ಲ, ನೆಹರೂ ಪಾದಕ್ಕೂ ಮೋದಿ ಸಮಾನ ಅಲ್ಲ ಅಂತ ನಾನು ಹೇಳಕ್ಕಾಗತ್ತಾ? ಪ್ರೈಮ್‌ಮಿನಿಸ್ಟರ್ ಅವರು, ಹಾಗಂತ ಯಡಿಯೂರಪ್ಪ ರಾಹುಲ್ ಗಾಂಧಿ ಪಾದಕ್ಕೂ ಸಮಾನ ಅಲ್ಲ ಅಂತ ನಾನು ಹೇಳಲ್ಲ, ಅದು ಕೀಳು ಅಭಿರುಚಿಯಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಸಿಎಂ ಆದವರು ಆ ತರಹ ಎಲ್ಲ ಮಾತನಾಡಬಾರದು, ಯಡಿಯೂರಪ್ಪ ಇಷ್ಟೊಂದು ಕೀಳುಮಟ್ಟಕ್ಕೆ ಇಳಿದು ಮಾತನಾಡ್ತಾರೆ ಅಂತ ಅಂದುಕೊಂಡಿರಲಿಲ್ಲ, ಯಡಿಯೂರಪ್ಪಗೆ ವಯಸ್ಸಾಗಿದೆ ಅರುಳು ಮರುಳಾಗಿರಬಹುದೇನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *