Breaking News

ಶೀಲ ಶಂಕಿಸಿ ಪತ್ನಿಯನ್ನೇ ಕೊಲೆಗೈದು ಕೊನೆಗೆ ತಾನೂ ನೇಣು ಬಿಗಿದುಕೊಂಡ ಪತಿ

ಧಾರವಾಡ: ತನ್ನ ಪತ್ನಿಯ ಶೀಲ ಶಂಕಿಸಿದ ಪತಿರಾಯನೊಬ್ಬ ಆಕೆಯನ್ನು ಕೊಲೆ ಮಾಡಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ.

ಶ್ರೀದೇವಿ ರಾಮಾಪುರ ಎಂಬುವವಳೇ ಪತಿಯಿಂದ ಕೊಲೆಯಾದವಳು. ರಾಜು ರಾಮಾಪುರ ಎಂಬಾತನೇ ನೇಣು ಹಾಕಿಕೊಂಡು ಕೊನೆಗೆ ಆತ್ಮಹತ್ಯೆ ಮಾಡಿಕೊಂಡವನು.

ಪತ್ನಿಯ ಮೇಲೆ ಸಂಶಯಪಡುತ್ತಿದ್ದ ರಾಜು, ಆಕೆಯನ್ನು ಹೊಲದಲ್ಲೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಆನಂತರ ತಾನೂ ಹೊಲದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೂರು ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *