ಬೆಂಗಳೂರು : ಮಳೆ ಪೀಡಿತ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಗೆ ವಿಜಯನಗರ ಜಿಲ್ಲೆಯ ಕಮಲಾಪುರದ ಹೋಟೆಲ್ ನಿಂದ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ.
ವಿಜಯಪುರ, ಧಾರವಾಡ, ದಾವಣಗೆರೆ, ಬೆಳಗಾವಿ, ವಿಜಯಪುರ, ಗದಗ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಬೀದರ್, ಕೊಪ್ಪಳ ಮತ್ತು ಮೈಸೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ಮಳೆಯಿಂದಾಗಿ ಉಂಟಾಗಿರುವ ನಷ್ಟದ ಬಗ್ಗೆ ಮಾಹಿತಿ ಸಂಗ್ರಹಿಸಿ, ಪರಿಸ್ಥಿತಿ ನಿಭಾಯಿಸುವ ಸಂಬಂಧ ಸಲಹೆ ಸೂಚನೆ ನೀಡಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

