Breaking News

ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಕೆಲಸಕ್ಕೆ ಹಾಜರಾದ ಪ್ರವೀಣ್‌ ನೆಟ್ಟಾರು ಅವರ ಪತ್ನಿ



ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರ ಆದೇಶದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ದಿ| ಪ್ರವೀಣ್‌ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರು  ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು ನೇಮಕಾತಿ ಆದೇಶ ಪತ್ರ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಿದರು. ಸಿಎಂ ಕಚೇರಿಯ ಆದೇಶ ಪ್ರಕಾರ ನೂತನ ಕುಮಾರಿ ಅವರನ್ನು ಜಿಲ್ಲಾಧಿಕಾರಿ ಕಚೇರಿಯ ಸಿಎಂ ಪರಿಹಾರ ನಿಧಿ ವಿಭಾಗದಲ್ಲಿ ಕರ್ತವ್ಯಕ್ಕೆ ಸೇರ್ಪಡೆಗೊಳಿಸಲಾಯಿತು.

ಪ್ರವೀಣ್‌ ನೆಟ್ಟಾರು ಹತ್ಯೆ ಬಳಿಕಕುಟುಂಬ ನಿರ್ವಹಣೆ ಹಿನ್ನೆಲೆಯಲ್ಲಿ ನೂತನ ಕುಮಾರಿ ಅವರಿಗೆ ಅನುಕಂಪದ ನೆಲೆಯಲ್ಲಿ ಬೆಂಗಳೂರಿನ ಸಿಎಂ ಕಚೇರಿಯಲ್ಲಿ ಉದ್ಯೋಗ ಲಭಿಸಿತ್ತು. ಆದರೆ ಅವರು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಲು ಬಯಸಿದ್ದು, ಜಿಲ್ಲಾ ಬಿಜೆಪಿ ಶಾಸಕರ ಮನವಿಯಂತೆ ಮಂಗಳೂರಿನಲ್ಲಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *