ಹುಬ್ಬಳ್ಳಿ: ದಸರಾಕ್ಕೆ ಶಾಲೆಗಳಿಗೆ ನೀಡುವ ಒಂದು ತಿಂಗಳ ರಜೆಯನ್ನು 15 ದಿನಕ್ಕೆ ಸೀಮಿತಗೊಳಿಸಿರುವ ಸರ್ಕಾರದ ನಡೆಗೆ ಮಾಜಿ ಸಭಾಪತಿ ಮತ್ತು ಹಾಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಶಿಕ್ಷಣ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ. ದಸರಾಗೆ ಈ ಮುಂಚೆ ಒಂದು ತಿಂಗಳು ರಜೆ ಕೊಡಲಾಗುತ್ತಿತ್ತು. ಹಾಗೇ ಎರಡು ತಿಂಗಳ ಬೇಸಿಗೆ ರಜೆ ನೀಡಲಾಗುತ್ತಿತ್ತು. ಆದ್ರೆ ಈ ಬಾರಿ ಕೇವಲ 15 ದಿನ ರಜೆ ನೀಡಿರೋದು ಸರಿಯಲ್ಲ. ದಸರಾ ಮತ್ತು ದೀಪಾವಳಿ ಹಬ್ಬ ಎರಡೂ ಒಂದೇ ತಿಂಗಳಲ್ಲಿ ಬಂದಿವೆ. ಹೀಗಾಗಿ ಈ ಎರಡೂ ಹಬ್ಬ ಮುಗಿಯೋವರೆಗೆ ರಜೆ ಕೊಡಬೇಕಾಗಿತ್ತು ಎಂದು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

