Breaking News

ಕನ್ನಡ ಭಾಷೆಯ ದುರ್ಬಳಕೆ : ಸಂತೋಷ ಹೆಗ್ಡೆ


ಬೆಂಗಳೂರು : ‘ಕನ್ನಡಕ್ಕಿರುವ ಗೌರವವನ್ನು ದುರ್ಬಳಕೆ ಮಾಡಿಕೊಂಡು ಕೆಲವರು ಲಾಭ ಪಡೆಯುವ ಕೆಲಸ ಮಾಡುತ್ತಿದ್ದಾರೆ’ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ಬೇಸರ ವ್ಯಕ್ತಪಡಿಸಿದರು.

ಕನ್ನಡ ಜನಶಕ್ತಿ ಕೇಂದ್ರದಿಂದ ಭಾನುವಾರ ನಡೆದ ‘ಕನ್ನಡವೆಂದರೆ ಬರಿ ನುಡಿಯಲ್ಲ’ ಎರಡು ದಿನಗಳ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಕನ್ನಡವನ್ನು ಸಂವಿಧಾನ ಗೌರವಿಸಿ ಮಾನ್ಯತೆ ನೀಡಿದೆ. ಕರ್ನಾಟಕ ಹಾಗೂ ಕನ್ನಡಕ್ಕೆ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಎಂಬ ಭೇದಭಾವ ಇಲ್ಲ. ಕನ್ನಡಿಗರಲ್ಲಿ ಹರಿಯುವ ರಕ್ತ ಒಂದೇ. ಆದರೆ, ಕೆಲವರು ಪ್ರಾದೇಶಿಕ ಭಿನ್ನತೆ ವ್ಯಕ್ತಪಡಿಸುತ್ತಿದ್ಧಾರೆ’ ಎಂದು ಹೇಳಿದರು.

‘ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಬಂದರೆ ಆರಂಭದಲ್ಲಿಯೇ ಮಟ್ಟಹಾಕಬೇಕು’ ಎಂದು ಸಲಹೆ ನೀಡಿದರು. ‘ಕನ್ನಡದ ಪಂಡಿತ ನಾನು ಅಲ್ಲ. ಆದರೆ, ನಾನು ಕನ್ನಡದ ಅಪ್ಪಟ ಅಭಿಮಾನಿ’ ಎಂದೂ ಸಂತೋಷ ಹೆಗ್ಡೆ ನುಡಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *