Breaking News

ಅ. 21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ


ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಅಕ್ಟೋಬರ್ 21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.21ರಂದು ನಡೆಯುವ ಸಮಾವೇಶದಲ್ಲಿ ಕಿತ್ತೂರು ಕರ್ನಾಟಕದ ಪ್ರಥಮ ರಾಷ್ಟ್ರಮಾತೆ ಚನ್ನಮ್ಮರವರ 244ನೇ ಜಯಂತಿ, 199ನೇ ವಿಜಯೋತ್ಸವ ಮಾಡಲಾಗುವುದು. ಅಕ್ಟೋಬರ್ 21ರೊಳಗೆ ಮೀಸಲಾತಿ ಘೋಷಿಸದಿದ್ದರೆ ಅಂತಿಮ ಹಂತದ ಹೋರಾಟದ ದಿನಾಂಕ ನಿಗದಿ ಮಾಡುತ್ತೇವೆ. 25 ಲಕ್ಷ ಜನ ಸೇರಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ದಿನಾಂಕ ನಿಗದಿ ಮಾಡುತ್ತೇವೆ ಎಂದರು‌.

ಮೀಸಲಾತಿ ಘೋಷಣೆ ವಿನಾಕಾರಣ ವಿಳಂಬ ಮಾಡಿ ಚುನಾವಣೆ ವೇಳೆ ನೀತಿ ಸಂಹಿತೆ ಜಾರಿಯಾದರೆ ನಮ್ಮ ಹೋರಾಟಕ್ಕೆ ಹಿನ್ನಡೆ ಆಗಬಾರದು. ಹೀಗಾಗಿ ಉಗ್ರವಾದ ಹೋರಾಟಕ್ಕೆ ನಾವು ತಯಾರಿ ಮಾಡಿದ್ದೇವೆ ಎಂದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *