Breaking News

ಪರಿಹಾರ ವಿತರಣೆಯಲ್ಲಿ ತಾರತಮ್ಯ ವಿರೋಧಿಸಿ ಪ್ರತಿಭಟನೆ

ಅಣ್ಣಿಗೇರಿ: ಇತ್ತೀಚೆಗೆ ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಬೆಳೆ ಹಾಗೂ ಮನೆಗಳಿಗೆ ಅಪಾರ ಹಾನಿಯಾಗಿದ್ದು, ಸರ್ಕಾರ ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಪಕ್ಷಾತೀತ ರೈತ ಸಂಘದ ಅಧ್ಯಕ್ಷ ನಿಂಗಪ್ಪ ಬಡ್ಡೇಪ್ಪನವರ ಆರೋಪಿಸಿದರು.

ತಹಶೀಲ್ದಾರ್ ಅನೀಲ ಬಡಿಗೇರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿ ಮಾತನಾಡಿದ ಅವರು, ‘ಜಮೀನಿನ ಬದುವು, ಹೋಳಗಟ್ಟಿಗಳು ಕೂಡಾ ಮಳೆಯ ರಭಸಕ್ಕೆ ಕೊಚ್ಚಿಕೊಂಡು ಹೋಗಿವೆ. ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

‘ಈಗಾಗಲೇ ವಿತರಣೆಯಾಗಿರುವ ಪರಿಹಾರದ ಬಗ್ಗೆಯೂ ಮತ್ತೊಮ್ಮೆ ಪರಿಶೀಲನೆ ಮಾಡಿ ಹೆಚ್ಚಿನ ಪರಿಹಾರ ವಿತರಿಸಬೇಕು’ ಎಂದು ರೈತ ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.

ಈಶ್ವರಪ್ಪ ಶ್ಯಾನಬೋಗರ, ಸಾತಪ್ಪ ಭೋವಿ, ವಿ.ವಿ. ಅಂಗಡಿ, ಸಿ.ಎ. ಹುರಕಡ್ಲಿ, ಎಂ.ಎಫ್. ಹೆಬಸೂರ, ಕುನ್ನಿಬಾಯಿ ಇದ್ದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *