ಬೆಂಗಳೂರು; ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿಯಾಗಿದ್ದ ಅವರ ವಿರುದ್ಧ ಹಲವಾರು ಆರೋಪ ಕೇಳಿ ಬಂದಿತ್ತು.
ಕರ್ನಾಟಕ ಸರ್ಕಾರ ಗುರುವಾರ ಈ ಕುರಿತು ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಬಿ. ಎಂ. ಲಕ್ಷ್ಮೀ ಪ್ರಸಾದ್ರನ್ನು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಸಿಬ್ಬಂದಿ ನಿಶಾ ಜೇಮ್ಸ್ ವಿರುದ್ಧ ದೂರು ನೀಡಿದ್ದರು. 20ಕ್ಕೂ ಅಧಿಕ ಎಫ್ಡಿಎ, ಎಸ್ಡಿಎಗಳು ಆಡಳಿತ ವಿಭಾಗದ ಎಡಿಜಿಪಿ ಡಾ. ಎಂ. ಎ. ಸಲೀಂಗೆ ದೂರು ನೀಡಿದ್ದರು.