ಮೈಸೂರು: ಹೆಚ್.ಡಿ ಕುಟುಂಬ ಸಮೇತ ತಾಯಿ ಚಾಮುಂಡಿ ಬೆಟ್ಟಕ್ಕೆ ದೇವಿಯ ದರ್ಶನ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು. ದೇವಿಯ ದರ್ಶನ ಪಡೆದಿದ್ದೇವೆ. ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ಬೇಡಿದ್ದೇನೆ ಎಂದರು.
ಇನ್ನು ನಿಖಿಲ್ ಕುಮಾರಸ್ವಾಮಿ ಸ್ಪರ್ಧೇ ಬಗ್ಗೆ ಸುಳಿವು ನೀಡಿದ್ದಾರೆ. ನಿಖಿಲ್ ಜೆಡಿಎಸ್ ಪಕ್ಷದ ಶಾಸಕರ 126 ಸ್ಥಾನ ಗೆಲ್ಲಿಸಿ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ತರಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ. ಆದರೆ 126 ರಲ್ಲಿ ನಿಖಿಲ್ ಇರಬಹುದು ಎಂದು ಪರೋಕ್ಷವಾಗಿ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

