Breaking News

ಪೊಲೀಸ್ ಹುತಾತ್ಮ ದಿನ : ಕರ್ತವ್ಯದ ವೇಳೆ ಹುತಾತ್ಮರಾದ ಖಾಕಿಪಡೆಗೆ ನಮನ


ಚಾಮರಾಜನಗರ: ಜಿಲ್ಲಾ ಪೊಲೀಸ್ ಇಲಾಖೆಯು ನಗರದ ಜಿಲ್ಲಾ ಸಶಸ್ತ್ರ‌ ಮೀಸಲು ಪಡೆ ಮೈದಾನದಲ್ಲಿ  ಪೊಲೀಸ್ ಹುತಾತ್ಮ ದಿನಾಚರಣೆ ಹಮ್ಮಿಕೊಂಡಿತ್ತು.

ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾ. ಬಿ.ಎಸ್. ಭಾರತಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಬಂಡೀಪುರ ಸಿಎಫ್‌ಒ ರಮೇಶ್ ಕುಮಾರ್, ಜಿಪಂ‌ ಸಿಇಒ‌ ಕೆ.ಎಂ. ಗಾಯತ್ರಿ, ವಿವಿಧ ಸಂಘಟನೆಗಳ ಮುಖಂಡರು ಪುಷ್ಪ ನಮನ ಸಲ್ಲಿಸಿದರು.‌ ಹುತಾತ್ಮರ ಸ್ಮರಣಾರ್ಥ ಗಾಳಿಯಲ್ಲಿ ‌ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು.

ಎಸ್ಪಿ ಟಿ.ಪಿ. ಶಿವಕುಮಾರ್ ಅವರು ಜಿಲ್ಲೆಯ ಎಎಸ್‌ಐ ರಾಜು ಹಾಗೂ ಕಾನ್ ಸ್ಟೆಬಲ್ ಪ್ರಸಾದ್ ಸೇರಿದಂತೆ ದೇಶದಾದ್ಯಂತ ಈವರೆಗೆ ಕರ್ತವ್ಯದ ವೇಳೆ ಹುತಾತ್ಮರಾದ 264 ಮಂದಿಯ‌ ಹೆಸರನ್ನು ಓದಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *