ಚಿತ್ರದುರ್ಗ: ನಗರದ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯ ಪ್ರಭು ಜಿ.ಆರ್.ಜೆ. ಶನಿವಾರದಂದು ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿದ್ದ ಕವಿತಾ ಎಸ್. ಮನ್ನಿಕೇರಿ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ದಿವ್ಯ ಪ್ರಭು ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿರುವುದರಿಂದ, ದಿವ್ಯ ಪ್ರಭು ಅವರು ಶನಿವಾರ ಅಧಿಕಾರ ವಹಿಸಿಕೊಂಡರು.
ನೂತನ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. 2014 ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ದಿವ್ಯ ಪ್ರಭು ಅವರು ಚಿತ್ರದುರ್ಗ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನವಾಗಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ, ಉಪವಿಭಾಗಾಧಿಕಾರಿ ಚಂದ್ರಯ್ಯ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

