Breaking News

ಮುಂದಿನ ಮೂರು ತಿಂಗಳು ಭಾರತ ಸೇರಿದಂತೆ ಇಡೀ ಜಗತ್ತಿಗೆ ಭಾರೀ ಕಂಟಕಹಾ


ಹಾಸನ : ಮುಂದಿನ ಮೂರು ತಿಂಗಳು ಭಾರತ ಸೇರಿದಂತೆ ಇಡೀ ಜಗತ್ತಿಗೆ ಭಾರೀ ಕಂಟಕ ಕಾದಿದೆ ಎಂದು ಕೋಡಿ ಮಠದ ಸ್ವಾಮೀಜಿ ಮತ್ತೆ ಭವಿಷ್ಯ ನುಡಿದಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಳ್ಳಿಯಲ್ಲಿರುವ ಕೋಡಿ ಮಠದಲ್ಲಿ ಮಾತನಾಡಿದ ಅವರು, ಕಾರ್ತಿಕ, ಮಾರ್ಗಶಿರದಿಂದ ತೊಡಗಿ ಜನವರಿ ಪ್ರಥಮ ಭಾಗದವರೆಗೆ ಭಾರಿ ಲೋಕ ಕಂಟಕವಿದೆ.

ಅದು ಭೂ ಕಂಟಕದ ರೂಪದಲ್ಲಿರಬಹುದು, ಪ್ರಾದೇಶಿಕವಾಗಿಯೂ ಸಂಘರ್ಷವಿರಬಹುದು, ಪ್ರಾಕೃತಿಕಾಗಿಯೂ ಇರಬಹುದು, ರಾಜ ಬೀದಿಯೂ ಇರಬಹುದು ಎಂದು ಹೇಳಿದರು.

ಆದರೆ ರಾಜ ಬೀದಿಯ ವಿವರಣೆ ನೀಡಲಿಲ್ಲ. ಜಾಗತಿಕವಾಗಿ ಬಾಂಬ್‌ ಗಳು , ಭೂಕಂಪ, ಯದ್ಧ ಭೀತಿ ಇದೆ. ಇದು ಕೇವಲ ಜಗತ್ತಿಗೆ ಸಂಬಂಧಿಸಿದ್ದಲ್ಲ, ದೇಶಿಯಾಗಿ ಕೆಲವೊಂದು ಕಂಟಕಗಳಿವೆ ಎಂದು ಹೇಳಿದ್ದಾರೆ.ಜನ ಜನಗಳ ಮೇಲೆ ನಿಯಂತ್ರಣ ಕಳೆದುಕೊಂಡು ಹುಚ್ಚರಾಗುತ್ತಾರೆ. ಹೆಚ್ಚಿನವರಿಗೆ ದೈಹಿಕ ಅಶಕ್ತಿ ಕಾಡಲಿದೆ ಎಂದು ಹೇಳಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *