ಬೆಳಗಾವಿ; ಸವದತ್ತಿ ಮತಕ್ಷೇತ್ರ ಶಾಸಕ ಹಾಗೂ ವಿಧಾನ ಸಭೆಯ ಉಪ ಸಭಾಪತಿ ಆನಂದ ಮಾಮನಿ ವಿಧಿವಶರಾಗಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವರು, ಶಾಸಕರು ಸೇರಿದಂತೆ ಸಾವಿರಾರು ಬೆಂಬಲಿಗರು ಆಪ್ತರು ಅಂತಿಮ ದರ್ಶನ ಪಡೆದರು. ಕ್ಷೇತ್ರದ ಬೆಂಬಲಿಗರು ಆಪ್ತರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದ್ದು ಪತ್ನಿ ಹಾಗೂ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ.
ಸವದತ್ತಿ ಮತಕ್ಷೇತ್ರದಲ್ಲಿ ಸತತವಾಗಿ ಮೂರು ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧಿಸಿದ ಆನಂದ ಉರ್ಫ್ ವಿಶ್ವನಾಥ ಚಂದ್ರಶೇಖರ ಮಾಮನ ಶನಿವಾರ ತಡರಾತ್ರಿಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಅನಾರೋಗ್ಯ ಹಿನ್ನಲೆಯಲ್ಲಿ ಬೆಂಗಳೂರು ಆಸ್ಪತ್ರೆಯಲ್ಲಿ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದ ಆನಂದ ಮಾಮನಿ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನಲ್ಲಿ ನಿಧನರಾದರು. ಹಲವು ದಿನಗಳಿಂದ ಲೀವರ ಸಮಸ್ಯೆಯಿಂದ ಬಳಲುತ್ತಿದ್ದ ಆನಂದ ಮಾಮನಿ ತುರ್ತಾಗಿ ಚೆನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದ ಅಲ್ಲಿಂದ ಬೆಂಗಳೂರು ಮಣಿಪಾಲ್ ಆಸ್ಪತ್ರೆ ಗೆ ಶಿಪ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೇ ಇಹಲೋಕವನ್ನು ತ್ಯಜಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

