Breaking News

ಅಪ್ಪು ಅಗಲಿ ಇಂದಿಗೆ ಒಂದು ವರ್ಷ


ಬೆಂಗಳೂರು: ಕರುನಾಡಿನ ಪ್ರತಿಯೊಬ್ಬರು ಕೂಡ ಅಂದುಕೊಂಡಿರುತ್ತಾರೆ. ಯಾಕೆಂದರೆ ನಮಗ್ಯಾರಿಗೂ ಅಪ್ಪು ನಮ್ಮ ಜೊತೆ ಇಲ್ಲ ಎಂದು ನೆನೆಪಿಸಿಕೊಳ್ಳುವುದಕ್ಕೂ ಇಷ್ಟವಿಲ್ಲ. ಪವರ್​ ಸ್ಟಾರ್ ​ ಪುನೀತ್​ ರಾಜ್​ಕುಮಾರ್​ ಇನ್ನೂ ನಮ್ಮ ಜೊತೆಯೆ ಇದ್ದಾರೆ. ಅಭಿಮಾನಿಗಳ ಹೃದಯ ಸಿಂಹಾಸನವೇರಿ ಕೂತಿದ್ದಾರೆ. ಕಳೆದ ವರ್ಷ ಈ ದಿನದಂದು ರಾಜ್ಯಕ್ಕೆ ಬರಸಿಡಿಲು ಬಡಿದಿತ್ತು.

ನಮ್ಮ ಪ್ರೀತಿಯ ಪವರ್ ಸ್ಟಾರ್ ಅವರನ್ನು ನಾವು ಕಳೆದುಕೊಂಡಿದ್ದೀವಿ. ಹೃದಯಾಘಾತದಿಂದ ಅಪ್ಪು ಬಾರದ ಲೋಕಕ್ಕೆ ಹೊರಟಿದ್ದರು. ಆ ಕರಾಳ ದಿನ ಮತ್ತೆ ಬಂದಿದೆ. ಇಂದು ಅಪ್ಪು ಅವರ ಮೊದಲ ಪುಣ್ಯ ಸ್ಮರಣೆ. ಇನ್ನೂ ಅಪ್ಪು ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ರಾತ್ರಿಯಿಂದಲೇ ಅಪ್ಪು ಸಮಾಧಿ ಬಳಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನಸಾಗರವೇ ಅಪ್ಪು ಸಮಾಧಿಗೆ ಹರಿದು ಬರ್ತಿದೆ. ಅಪ್ಪು ಸಮಾಧಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿದೆ. ಸಮಾಧಿ ಪೂರ್ತಿ ಹಸಿರು ಶ್ವೇತಾಂಬರಿ ವರ್ಣದ ಹೂಗಳಿಂದ ಸಿಂಗಾರಕೊಂಡಿದೆ. ಇನ್ನೂ ಅಪ್ಪು ಸಮಾಧಿ ಬಳಿ ನಿನ್ನೆ ರಾತ್ರಿಯಿಂದಲೇ 24 ಗಂಟೆಗಳ ಸಂಗೀತ ನಮನ ಕಾರ್ಯಕ್ರಮ ನಡೆಯುತ್ತಿದೆ. ಕರ್ನಾಟಕ ಫಿಲಂ ಮ್ಯೂಸಿಕ್ ಅಸೋಸಿಯೇಷನ್ ವತಿಯಿಂದ ಕಾರ್ಯಕ್ರಮ ನಡೆಯುತ್ತಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *